
ಪೆರ್ಡೂರು: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಉದ್ಯಮಿ ಹಾಗೂ ಬೆಂಗಳೂರು ತುಳು ಕೂಟದ ಅಧ್ಯಕ್ಷ ಬಿ. ದಿನೇಶ್ ಹೆಗ್ಡೆ ಪೆರ್ಡೂರು ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಅದರ ಗೌರವಾಧ್ಯಕ್ಷರಾಗಿ ದಿನೇಶ್ ಹೆಗ್ಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.