ಬಾಲ್ಯ ಸ್ನೇಹಿತರು 15 ವರ್ಷದಿಂದ ಪ್ರೀತಿಸ್ತಿದ್ದರು, ಮದುವೆಯಾದ ಮೇಲೆ ಹುಡುಗಿ ಆತ್ಮಹತ್ಯೆ

ಗಂಡನಿಗಾಗಿ ಟ್ರಾನ್ಸ್ ಫರ್..!

ಮದುವೆಯಾದ ಬಳಿಕ ಗಂಡನ ಜೊತೆ ಜೊತೆಯಲ್ಲೇ ಇರಬೇಕು ಅಂತಾ ಇತ್ತೀಚೆಗೆ ಮೂಡಬಿದ್ರೆಯಿಂದ ಉಜಿರೆಗೆ ವರ್ಗಾವಣೆ ಪಡೆದುಕೊಂಡಿದ್ದಳು. ಈ ವೇಳೆ ಸಹೋದ್ಯೋಗಿಗಳು ಈಕೆಗೆ ಅಕ್ಕರೆಯ ಬೀಳ್ಕೊಡುಗೆ ಕೊಟ್ಟಿದ್ದರು. ಈಕೆಗೆ ಅರಿಶಿಣ ಕುಂಕುಮ ಕೊಟ್ಟು ಮಡಿಲು ತುಂಬಿ ಕಳುಹಿಸಿದ್ದರು. ಇವರೆಲ್ಲರ ಪ್ರೀತಿಗೆ ಈಕೆ ಕಣ್ಣೀರಾಗಿದ್ದಳು. ಅಷ್ಟೊಂದು ಪ್ರೀತಿಯಿಂದ ಬಂದ ಕೌಶಲ್ಯಳನ್ನು ಪ್ರತಿನಿತ್ಯ ತನ್ನ ಗಂಡ ಸುಕೇಶನೇ ಕೆಲಸಕ್ಕೆ ಬಿಟ್ಟುಬರುತ್ತಿದ್ದ.

ಕಚೇರಿಗೆ ಹೋಗುವುದಾಗಿ ವಿಷ ಖರೀಧಿಸಿದ್ದಳು..!

ಮೊನ್ನೆ 20 ನೇ ತಾರೀಕು. ಉಜಿರೆಯ ಎಸ್.ಕೆ.ಡಿ.ಆರ್.ಡಿ.ಪಿ ಕಚೇರಿಗೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಸೀದಾ ಫರ್ಟಿಲೈಜರ್ ಶಾಪ್ ಗೆ ಹೋಗಿದ್ದಳು. ಅಲ್ಲಿ ಕಳೆನಾಶಕವನ್ನು ಖರೀದಿ ಮಾಡಿದ್ದಳು. ದಾರಿಯಲ್ಲಿ ಬರುತ್ತಾ ಅದನ್ನು ಕುಡಿದಿದ್ದಳು. ಕುಡಿದವಳೇ ಸೀದಾ ತನ್ನ ಅಮ್ಮನ ಮನೆಗೆ ಬಂದು ತಾನು ವಿಷ ಕುಡಿದಿರೋದಾಗಿ ಹೇಳಿದಳು. ತಂದೆ ಇಲ್ಲದ ಮಗಳು ಅಂತಾ ಕೌಶಲ್ಯಳನ್ನು ತನ್ನ ಕಣ್ಣಲ್ಲಿ ಕಣ್ಣಿಟ್ಟು ಆಕೆಯ ಅಮ್ಮ ಸಾಕಿದ್ದಳು. ಇಂತಹ ಮಗಳು ವಿಷ ಕುಡಿದಿರೋದಾಗಿ ಹೇಳಿದನ್ನು ಕೇಳಿ ತಾಯಿ ಒಮ್ಮೆ ದಿಗ್ಭಾಂತರಾದ್ರು. ತಕ್ಷಣ ಕೌಶಲ್ಯ ಅಮ್ಮ ಹಾಗೂ ಮನೆಯವರು ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು. ಮೂರು ದಿನಗಳ ಕಾಲ ಚಿಕಿತ್ಸೆಯನ್ನು ನೀಡಿದರೂ ಅದು ಫಲಿಸದೇ ನಿನ್ನೆ ಕೊನೆಯುಸಿರೆಳೆದಿದ್ದಾಳೆ.

Share

Leave a Reply

Your email address will not be published. Required fields are marked *